ಆಗಸ್ಟ್‌ 3ಕ್ಕೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್–ವಿಜಯ್ ಭೇಟಿ? ವಿಧಾನಸೌಧದಲ್ಲಿ ಭರ್ಜರಿ ಸಿದ್ಧತೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ. ಆಗಸ್ಟ್‌ 3ರಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಭೆ ನಡೆಯಲಿದೆ ಎನ್ನುವ ಮಾಹಿತಿ ಹಿನ್ನೆಲೆ, ರಾಜ್ಯ ಸರ್ಕಾರ ವಿಧಾನಸೌಧದಲ್ಲಿ ಸಕಲ ಸಿದ್ಧತೆಗಳನ್ನು ಆರಂಭಿಸಿದೆ.

ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ಗೆ ನವೀಕರಣ ಕಾರ್ಯ ಭರದಿಂದ ಸಾಗುತ್ತಿದೆ. ಸಭಾಂಗಣಕ್ಕೆ ಸುಣ್ಣ-ಬಣ್ಣ ಹಚ್ಚುವುದು, ಒಳಾಂಗಣ ಅಲಂಕಾರ, ಆಸನ ವ್ಯವಸ್ಥೆ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿದ್ದು, ಉನ್ನತ ಮಟ್ಟದ ಸಭೆಗೆ ತಕ್ಕಂತೆ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗುತ್ತಿದೆ.

ಕಾವೇರಿ ನೀರಿನ ಹಂಚಿಕೆ ಕುರಿತಾಗಿ ಎರಡೂ ರಾಜ್ಯಗಳ ನಡುವೆ ಹಲವು ವರ್ಷಗಳಿಂದ ವಿವಾದ ಮುಂದುವರಿದಿರುವ ಸಂದರ್ಭದಲ್ಲಿ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ನೀರಿನ ಹಂಚಿಕೆ, ರಾಜ್ಯಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.

ಆದಾಗ್ಯೂ, ಆಗಸ್ಟ್‌ 3ರಂದು ಈ ಸಭೆ ನಡೆಯಲಿದೆ ಎಂಬ ಕುರಿತು ರಾಜ್ಯ ಸರ್ಕಾರದಿಂದ ಅಥವಾ ತಮಿಳುನಾಡು ಸರ್ಕಾರದಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಅಧಿಕೃತ ಮಾಹಿತಿ ಹೊರಬರುವ ನಿರೀಕ್ಷೆಯಿದ್ದು, ರಾಜಕೀಯ ವಲಯದಲ್ಲಿ ಈ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |     ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್: A14 ಪ್ರದೋಷ್ ‘ಮಾಫಿ ಸಾಕ್ಷಿ’ ಅರ್ಜಿ ಸಲ್ಲಿಕೆ     |     ಭಾರತೀಯ ವಾಯುಪಡೆಯ ಇತಿಹಾಸದಲ್ಲಿ ಹೊಸ ದಾಖಲೆ: ಭಾವನಾ ಕಾಂತ್‌ಗೆ ಪ್ರತಿಷ್ಠಿತ Fighter Combat Leader ಅರ್ಹತೆ     |     ‘ತೆಹೆಲ್ಕಾ’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ     |     ನಾಗ್ಪುರದಲ್ಲಿ ವಿದ್ಯಾರ್ಥಿನಿ ಅಪಹರಣ-ಅತ್ಯಾಚಾರ; ಊಟದ ಆರ್ಡರ್ ಪೊಲೀಸರಿಗೆ ನೀಡಿತು ಮಹತ್ವದ ಸುಳಿವು     |     ಹಾರ್ಮುಜ್ ಜಲಸಂಧಿ ವಿವಾದ ತೀವ್ರ: ಅಮೆರಿಕ ಹೇಳಿಕೆಗೆ ಇರಾನ್ ತಿರುಗೇಟು – ‘ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವಿಲ್ಲ’     |     ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: 5.25% ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ     |     ‘ಮೋದಿ ಪ್ರಧಾನಿ ಸ್ಥಾನ ತೊರೆದು ಇನ್‌ಫ್ಲುಯೆನ್ಸರ್ ಆಗಲಿ’ – ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಭಿಜೀತ್ ದೀಪ್ಕೆ ವಿವಾದಾತ್ಮಕ ಹೇಳಿಕೆ     |     ಆಗಸ್ಟ್‌ 3ಕ್ಕೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್–ವಿಜಯ್ ಭೇಟಿ? ವಿಧಾನಸೌಧದಲ್ಲಿ ಭರ್ಜರಿ ಸಿದ್ಧತೆ     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें